|
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಛ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ರಚಿಸಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಈ ಪ್ರಶಸ್ತಿಯನ್ನು ಮೇ ೨೨ ೧೯೬೧ ರಲ್ಲಿ ಸ್ಥಾಪಿಸಲಾಯಿತು. ಈ ಪ್ರಶಸ್ತಿಯನ್ನು ಪ್ರಪ್ರಥಮವಾಗಿ ೧೯೬೫ ರಲ್ಲಿ ಮಲೆಯಾಳಂ ಲೇಖಕ ಜಿ. ಶಂಕರ ಕುರುಪರಿಗೆ ಪ್ರದಾನ ಮಾಡಲಾಯಿತು. ವಿಜೇತರಿಗೆ ಪ್ರಶಸ್ತಿ ಫಲಕ, ಐದು ಲಕ್ಷ ರುಪಾಯಿ ನಗದು ಹಾಗು ವಾಗ್ದೇವಿಯ ಕಂಚಿನ ವಿಗ್ರಹವನ್ನು ನೀಡಿ ಗೌರವಿಸಲಾಗುವುದು.
ಜ್ಞಾನಪೀಠದ ಹಿನ್ನೆಲೆಈ ಪ್ರಶಸ್ತಿಯನ್ನು ಭಾರತ ಸರಕಾರ ನೀಡುತ್ತದೆ ಎಂಬ ತಪ್ಪು ಕಲ್ಪನೆಯೂ ವ್ಯಾಪಕವಾಗಿದೆ. ವಾಸ್ತವದಲ್ಲಿ ಈ ಪ್ರಶಸ್ತಿಯನ್ನು ನೀಡುವವರು ಜ್ಞಾನ ಪೀಠ ಟ್ರಸ್ಟ್. ಟೈಂಸ್ ಆಫ್ ಇಂಡಿಯಾದ ಒಡೆತನವನ್ನು ಹೊಂದಿರುವ ಜೈನ್ ಕುಟುಂಬ ಜ್ಞಾನಪೀಠ ಟ್ರಸ್ಟ್ ನ ಸ್ಥಾಪಕರು. ಈಗಲೂ ಅದರ ಸದಸ್ಯರಲ್ಲಿ ಹೆಚ್ಚಿನವರು ಈ ಕುಟುಂಬಕ್ಕೆ ಸೇರಿದ್ದಾರೆ. ೧೯೮೨ ರಿಂದ, ಈ ಪ್ರಶಸ್ತಿಯನ್ನು ಭಾರತೀಯ ಸಾಹಿತ್ಯಕ್ಕೆ ಸಮಗ್ರ ಕೊಡುಗೆಯನ್ನು ನೀಡಿದ ಲೇಖಕರಿಗೆ ಸಂದಾಯವಾಗುತ್ತಿದೆ. ಈವರೆಗೆ ಕನ್ನಡ ಸಾಹಿತಿಗಳು ಏಳು ಪ್ರಶಸ್ತಿಗಳನ್ನು ಪಡೆದು ಕನ್ನಡವನ್ನು ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಹಿಂದಿ ಭಾಷೆಯು ಆರು ಪ್ರಶಸ್ತಿಯನ್ನು ಪಡೆದು ಎರಡನೆ ಸ್ಥಾನದಲ್ಲಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿಈ ಪುಟಗಳನ್ನೂ ನೋಡಿಬಾಹ್ಯ ಸಂಪರ್ಕಗಳು |
This article is from Wikipedia. All text is available under the terms of the GNU Free Documentation License.